March 22, 2026
Road-accident1712130925

ಸುರತ್ಕಲ್: ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ದ್ವಿಚಕ್ರ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ.

ಮೃತರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ (61) ಮತ್ತು ಚೇಳಾಯರಿನಲ್ಲಿ ವಾಸವಿರುವ ಹನುಮಂತ ಎಂಬವರ ಮಗ ವಿಶ್ವನಾಥ (16) ಗಾಯಗೊಂಡು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.