ಬಂಟ್ವಾಳ: ಕೋಮು ದ್ವೇಷಕ್ಕೆ ಬಲಿಯಾದ ಕೊಳತ್ತಮಜಲು ಅಬ್ದುಲ್ ರಹೀಂ ಮನೆಗೆ ಸ್ಪೀಕರ್ ಯು.ಟಿ ಖಾದರ್ ಭೇಟಿ ನೀಡಿ, ಕುಟುಂಬಕ್ಕೆ ಸಾಂತ್ವನ ಹೇಳಿದರು.

ರಹೀಂ ಕುಟುಂಬಕ್ಕೆ ಎಲ್ಲಾ ರೀತಿಯ ಸಹಾಯ ಸಹಕಾರ ನೀಡುವ ಬಗ್ಗೆ ತಿಳಿಸಿದ ಯ.ಟಿ ಖಾದರ್ ಅವರು, ನಿಮ್ಮ ಸಂಕಷ್ಟದ ಹಾಗೂ ನೋವಿನ ಸಮಯದಲ್ಲಿ ನಾನು ಸದಾ ನಿಮ್ಮೊಂದಿಗೆ ಇರುತ್ತೇನೆ ಎಂದು ಭರವಸೆಯನ್ನು ನೀಡಿದರು.