June 5, 2025
who_has_blocked_me_on_social_media_Instagram_cavpjb

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಸಂದೇಶ ಹಾಕಿ ಸಮಾಜ ಮತ್ತು ವಿವಿಧ ಧರ್ಮ ಹಾಗೂ ವರ್ಗಗಳ ಮಧ್ಯೆ ದ್ವೇಷದ ಭಾವನೆ ಸೃಷ್ಟಿಸಿದ ಆರೋಪದ ಮೇರೆಗೆ team_karna_surathkal ಎಂಬ Instagram ಪೇಜನ್ನು ರದ್ದುಗೊಳಿಸಲಾಗಿದೆ ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಸುಮಾರು 1650ರಷ್ಟು ಸಂಖ್ಯೆಯ ಪಾಲೋವಸ್ ಹೊಂದಿದ್ದ ಈ ಪೇಜ್ ವಿರುದ್ದ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆಗಾಗಿ ಪ್ರಕರಣವನ್ನು ಮಂಗಳೂರು ನಗರ ಸೆನ್ ಅಪರಾಧ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ಈ ಪೇಜ್ ಬಗ್ಗೆ ಮಾಹಿತಿ ನೀಡುವಂತೆ Law Enforcement Agency ಪತ್ರ ಬರೆಯಲಾಗಿತ್ತು. ಅದರಂತೆ ಸಂಬಂಧಪಟ್ಟವರು ಈ Instagram ಪೇಜ್‌ನ್ನು ಕಾರ್ಯನಿರ್ವಹಿಸದಂತೆ ರದ್ದುಗೊಳಿಸಿರುತ್ತಾರೆ ಎಂದು ತಿಳಿಸಿದ್ದಾರೆ.