ಬಂಟ್ವಾಳ :78ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಇಂದು ಗೂಡಿನಬಳಿ ವಲಯ ಕಾಂಗ್ರೆಸ್ ಸಮಿತಿ ಹಾಗೂ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಪಕ್ಷದ ಕಚೇರಿಯ ಮುಂದೆ ಧ್ವಜಾರೋಹಣ ಕಾರ್ಯಕ್ರಮವು ನಡೆಯಿತು.
ಪಕ್ಷದ ಬೂತ್ ಅಧ್ಯಕ್ಷರು, ಹಿರಿಯ ಮುಖಂಡರುಗಳು, ಕಾರ್ಯಕರ್ತರು, ಗೂಡಿನಬಳಿ ಮಸೀದಿಯ ಧರ್ಮ ಗುರುಗಳು ಹಾಗೂ ಊರಿನ ಗಣ್ಯ ವ್ಯಕ್ತಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.
