March 22, 2026

ಉತ್ತರ ಪ್ರದೇಶ ಸ್ಪೀಕರ್ ಶ್ರೀ ಸತೀಶ್ ಮಹಾನಾ ಅವರ ಆಹ್ವಾನದ ಮೇರೆಗೆ ಪ್ರಯಾಗ್ ರಾಜ್ ಮಹಾ ಕುಂಭ ಮೇಳ ಹಾಗೂ ಹಜರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ (ರ.ಅ)ದರ್ಗಾ ಶರೀಫ್‌ಗೆ ಭೇಟಿ ನೀಡಿದ ಸಭಾಧ್ಯಕ್ಷ ಯು ಟಿ ಖಾದರ್

ಉತ್ತರ ಪ್ರದೇಶ ವಿಧಾನಸಭೆಯ ಸಭಾಧ್ಯಕ್ಷರಾದ ಶ್ರೀ ಸತೀಶ್ ಮಹಾನಾ ರವರ ಆಹ್ವಾನದ ಮೇರೆಗೆ ಪ್ರಯಾಗ್ ರಾಜ್ ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭ ಮೇಳ ಹಾಗೂ ಅಲಹಾಬಾದ್‌ನಲ್ಲಿರುವ ಹಜರತ್ ಮಖ್ದೂಮ್ ಸಾದತ್ ಚೌಧೋನ್ ಪೀರೋ (ರ.ಅ)ದರ್ಗಾ ಶರೀಫ್‌ಗೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ಭೇಟಿ ನೀಡಿ ನಾಡಿನ ಒಳಿತಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.