April 25, 2025
IMG-20250424-WA0033

ಮಂಗಳೂರು: ಕೆಎಸ್ ​ಆರ್ ​ಟಿಸಿ ಬಸ್ ​ನಲ್ಲಿ ಕಂಡಕ್ಟರ್ ​ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಾಗಲಕೋಟೆ ಮೂಲದ ಪ್ರದೀಪ್‌ (40) ಪೊಲೀಸರು ವಶಕ್ಕೆ ಪಡೆದ ಆರೋಪಿ.

ಮಂಗಳೂರಿನ ಮುಡಿಪು -ಸ್ಟೇಟ್‌ ಬ್ಯಾಂಕ್‌ ಭಾಗದ ಕೆಎಸ್ ​ಆರ್ ​ಟಿಸಿ ಬಸ್ಸಿನಲ್ಲಿ ನಿರ್ವಾಹಕ ಪ್ರದೀಪ್‌ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿತ್ತು. ಬಸ್ ನಲ್ಲಿ ಪ್ರಯಾಣಿಕರೊಬ್ಬರು ಮಾಡಿರುವ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿತ್ತು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಪೊಲೀಸರು, ಆರೋಪಿ ಪ್ರದೀಪ್‌ ನನ್ನು ವಶಕ್ಕೆ ಪಡೆದಿದ್ದಾರೆ.

ಏಪ್ರಿಲ್ 22 ರಂದು ಮುಡಿಪುವಿನಿಂದ ಸ್ಟೇಟ್‌ ಬ್ಯಾಂಕ್​​ ನತ್ತ ತೆರಳುತ್ತಿದ್ದ ಬಸ್ ​​ನಲ್ಲಿ ಯುವತಿ ನಿದ್ರೆಗೆ ಜಾರಿದ್ದರು. ಆ ಸಂದರ್ಭದಲ್ಲಿ ಕಂಡಕ್ಟರ್ ಆ ಯುವತಿಗೆ ಕಿರುಕುಳ ನೀಡಿದ್ದಾನೆ. ಇದನ್ನು ಪ್ರಯಾಣಿಕರೊಬ್ಬರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು.