March 22, 2026
IMG-20240827-WA0013

ಕಡಬ: ಕಡಬ ತಾಲೂಕಿನ ನೂಜಿಬಾಳ್ತಿಲ ಎಂಬಲ್ಲಿ ಖಾಸಗಿ ಬಸ್ಸನ್ನು ಹಿಂದಿಕ್ಕಲು ಯತ್ನಿಸಿದ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ನಿವಾಸಿ ಗುತ್ಯಪ್ಪ ಎಂಬುವರ ಪುತ್ರ ದೇವರಾಜ್ (22) ಮೃತ ವ್ಯಕ್ತಿ. ಧರ್ಮಸ್ಥಳದಲ್ಲಿ ತೀರ್ಥಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ ಹಿಂತಿರುಗುತ್ತಿದ್ದರು. ಬೆಥನಿ ಕಾಲೇಜ್ ಬಳಿ ನೂಜಿಬಾಳ್ತಿಲ ತಲುಪಿದ ದೇವರಾಜ್ ಮುಂದೆ ಖಾಸಗಿ ಬಸ್ಸನ್ನು ಹಿಂದಿಕ್ಕಲು ಯತ್ನಿಸಿದರು. ಎದುರಿಗೆ ಬರುತ್ತಿದ್ದ ಇನ್ನೋವಾ ಕಾರನ್ನು ನೋಡಿ ಏಕಾಏಕಿ ಬ್ರೇಕ್ ಹಾಕಿದ್ದು, ಬೈಕ್ ಸ್ಕಿಡ್ ಆಗಿದೆ. ಪುತ್ತೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಬೈಕ್‌ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಯತ್ನಿಸಿದಾಗ ಇನ್ನೋವಾ ಕಾರು ಕೂಡ ಚರಂಡಿಗೆ ಬಿದ್ದಿದೆ. ಆದರೆ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ, ಆದರೂ ಕಾರಿಗೆ ಸಾಕಷ್ಟು ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಕಡಬ ಠಾಣಾ ನಿರೀಕ್ಷಕ ಅಭಿನಂದನ್ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ.