June 22, 2026
WhatsApp-Image-2024-10-27-at-3.20.01-PM

ಮಣಿಪಾಲ: ಕೆಳಪರ್ಕಳ ಸಮೀಪ ಈಶ್ವರ ನಗರದ ನಗರ ಸಭೆ ರೇಚಕದ ಬಳಿ ಹಳೆಯ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದಿದೆ.


ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ.ಕಾರು ಜಖಮ್ ಗೊಂಡಿದೆ. ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.


ಇಲ್ಲಿ ರಾಷ್ಟ್ರೀಯ ಹೆದ್ದಾರಿ ಅವೈಜ್ಞಾನಿಕವಾಗಿ ಅಡ್ಡವಾಗಿ ರಸ್ತೆ ಆಗೆ ದಿದ್ದು ಮತ್ತೆ ಹೊಂಡ ಬಿದ್ದಿದೆ, ರಸ್ತೆಯ ಸುತ್ತಮುತ್ತ ಹೊಂಡ ಇರುವುದರಿಂದ ವಾಹನ ಚಾಲಕರು ಅತ್ತಿಂದ ಇತ್ತ ಚಲಿಸಿ ನಿಯಂತ್ರಣತಪ್ಪಿ ಅಪಘಾತವು ದಿನನಿತ್ಯ ಆಗುವಂತಾಗಿದೆ.ಜಿಲ್ಲಾಡಳಿತ ಸೂಕ್ತ ಕ್ರಮ ಕೈಗೊಳ್ಳಬೇಕು. ಸ್ಥಳೀಯರು ಒತ್ತಾಯಿಸಿದ್ದಾರೆ