February 4, 2026
448-252-22268195-766-22268195-1724310478229

ಮಂಗಳೂರು: ಎಂಎಲ್ ಸಿ ಐವನ್ ಡಿಸೋಜಾ ಮನೆಗೆ ಕಲ್ಲು ಎಸೆದ ಪ್ರಕರಣದಲ್ಲಿ ಪೊಲೀಸರು ಇಬ್ಬರು ಸಂಘಪರಿವಾರದ ಕಾರ್ಯಕರ್ತ ಎನ್ನಲಾದವರನ್ನು ಬಂಧಿಸಿದ್ದಾರೆ.
ಕಲ್ಲಡ್ಕದ ದಿನೇಶ್ (20) ಮತ್ತು ಭರತ್ (24) ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ.
ಬಂಧಿತರಿಬ್ಬರೂ ವಿಎಚ್ ಪಿ ಹಾಗೂ ಬಜರಂಗದಳದ ಕಾರ್ಯಕರ್ತರು ಎಂದು ಹೇಳಲಾಗಿದೆ.
ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದ ದೃಶ್ಯವನ್ನು ಆಧರಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.